ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 06ನೇ ತರಗತಿ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಅರ್ಜಿ ನಮೂನೆ ಮತ್ತು ವಿವರಗಳನ್ನು ಉಪ ನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದ್ದು, www.sw.kar.nic.in ಆನ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ. 03 ರಂದು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080- 27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ.
ವಿಶೇಷ ಸೂಚನೆ:
ಪ್ರವೇಶ ಪರೀಕ್ಷೆಯನ್ನು ದಿನಾಂಕ: 09.05.2025 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ 01:30 ಗಂಟೆಯವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸ ಬಸ್ ನಿಲ್ದಾಣದ ಎದುರು, ದೇವನಹಳ್ಳಿ ಟೌನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…