ಪ್ರತಿಷ್ಠಿತ ಶಾಲೆಗಳ 6ನೇ ತರಗತಿಗೆ ಸೇರಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 06ನೇ ತರಗತಿ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಉಪ ನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದ್ದು, www.sw.kar.nic.in ಆನ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ. 03 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080- 27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ:

ಪ್ರವೇಶ ಪರೀಕ್ಷೆಯನ್ನು ದಿನಾಂಕ: 09.05.2025 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ 01:30 ಗಂಟೆಯವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸ ಬಸ್ ನಿಲ್ದಾಣದ ಎದುರು, ದೇವನಹಳ್ಳಿ ಟೌನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

15 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

18 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

23 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago