ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ: ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು- ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಪಾಯಿಗಳು ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಖರೀದಿ ಕೇಂದ್ರಗಳ ನೋಂದಣಿಗೆ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್ ಗಳು, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ, ರೈತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಕೃಷಿ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ ಅಧಿಕಾರಿಗಳಿಗೆ ಸೂಚಿಸಿದರು.

ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು ಜನವರಿ ಮಾಹೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಶುರುವಾಗಲಿದೆ. ಹಾಗಾಗಿ ರೈತರಿಂದ ಖರೀದಿಸಿದ ರಾಗಿಯನ್ನು ಕ್ರೂಡಿಕರಿಸಿ ಶೇಖರಿಸಲು ಉಗ್ರಾಣಗಳು ವ್ಯವಸ್ಥಿತ ಗುಣಮಟ್ಟದಲ್ಲಿ ಇದೆಯೇ ಎಂದು ಪರಿಶೀಲಿಸಿ, ಅವಶ್ಯವಿದ್ದಲ್ಲಿ ಹೆಚ್ಚುವರಿ ಉಗ್ರಾಣಗಳನ್ನು ನಿಗದಿ ಪಡಿಸಿ ಎಂದರು.

ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫ್ರೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫ್ರೂಟ್ಸ್ ಐಡಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಜಿ.ಶಂಕರಮೂರ್ತಿ, , ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು ಮತ್ತು ಇತರರು ಉಪಸ್ಥಿತರಿದ್ದರು.

*ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು*

*ನೆಲಮಂಗಲ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.

*ದೊಡ್ಡಬಳ್ಳಾಪುರ*
ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.

*ದೇವನಹಳ್ಳಿ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕುರುಬರ ದೊಡ್ಡಿ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ದೇವನಹಳ್ಳಿ.

*ಹೊಸಕೋಟೆ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

9 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago