ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ: ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು- ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಪಾಯಿಗಳು ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಖರೀದಿ ಕೇಂದ್ರಗಳ ನೋಂದಣಿಗೆ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್ ಗಳು, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ, ರೈತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಕೃಷಿ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ ಅಧಿಕಾರಿಗಳಿಗೆ ಸೂಚಿಸಿದರು.

ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು ಜನವರಿ ಮಾಹೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಶುರುವಾಗಲಿದೆ. ಹಾಗಾಗಿ ರೈತರಿಂದ ಖರೀದಿಸಿದ ರಾಗಿಯನ್ನು ಕ್ರೂಡಿಕರಿಸಿ ಶೇಖರಿಸಲು ಉಗ್ರಾಣಗಳು ವ್ಯವಸ್ಥಿತ ಗುಣಮಟ್ಟದಲ್ಲಿ ಇದೆಯೇ ಎಂದು ಪರಿಶೀಲಿಸಿ, ಅವಶ್ಯವಿದ್ದಲ್ಲಿ ಹೆಚ್ಚುವರಿ ಉಗ್ರಾಣಗಳನ್ನು ನಿಗದಿ ಪಡಿಸಿ ಎಂದರು.

ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫ್ರೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫ್ರೂಟ್ಸ್ ಐಡಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಜಿ.ಶಂಕರಮೂರ್ತಿ, , ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು ಮತ್ತು ಇತರರು ಉಪಸ್ಥಿತರಿದ್ದರು.

*ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು*

*ನೆಲಮಂಗಲ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.

*ದೊಡ್ಡಬಳ್ಳಾಪುರ*
ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.

*ದೇವನಹಳ್ಳಿ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕುರುಬರ ದೊಡ್ಡಿ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ದೇವನಹಳ್ಳಿ.

*ಹೊಸಕೋಟೆ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago