ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್ಎಸ್ಎಸ್ಐಆರ್ ಡಿ ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಪಾಲನೆ, ಶಿಸ್ತು ಪಾಲನೆ, ಹೊಸ ಹೊಸ ಮಕ್ಕಳ ನೋಂದಣಿ ಮಾಡಿಸುವುದು, ಮಕ್ಕಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ಓದುವ ಹಾಗೆ ಪ್ರೇರೇಪಿಸಬೇಕು ಎಂದರು.
ಮಕ್ಕಳು ಪುಸ್ತಕಗಳನ್ನು ಓದುವುದರಿಂದ ಮಾನಸಿಕವಾಗಿ ಪರಿಪಕ್ವವಾಗಿ ತನ್ನ ಆಲೋಚನಾ ಕ್ರಮ ಬದಲಾಗುತ್ತದೆ. ಸೃಜನಾತ್ಮಕ ಚಿಂತನೆ ಬೆಳೆಯುತ್ತದೆ. ಅಕ್ಷರ ಜ್ಞಾನ ವೃದ್ಧಿಯಾಗಿ ಭಾಷೆ ಬಗ್ಗೆ ಹಿಡಿತಸಿಗುತ್ತದೆ. ವಿಷಯ ತಿಳಿದುಕೊಂಡಷ್ಟು ಪ್ರಶ್ನೆ, ವಿಮರ್ಶೆ ಮಾಡುವ ಮನೋಭಾವ ಬೆಳೆಯುತ್ತದೆ ಆದ್ದರಿಂದ ವಿಶ್ವಾಸದ ಮೂಲಕ ಮಕ್ಕಳನ್ನು ಗ್ರಂಥಾಲಯದ ಕಡೆ ಸೆಳೆದು ಓದುವ ಹವ್ಯಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.
2021ರಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಯೋಜನೆಯಡಿ ಗ್ರಂಥಾಲಯದಲ್ಲಿ ಉಚಿತ ನೋಂದಣಿ ಮಾಡಿಸುವ ಮೂಲಕ ಗ್ರಂಥಾಲಯದತ್ತ ಹೆಜ್ಜೆ ಹಾಕುವಂತೆ ಮಾಡಲಾಯಿತು.
ಸಾರ್ವಜನಿಕರನ್ನು ವಿಶ್ವಾಸ, ಸೌಜನ್ಯದಿಂದ ಗ್ರಂಥಾಲಯಕ್ಕೆ ಸೆಳೆಯಬಹುದು. ವಿಶೇಷ ಚೇತನರಿಗಾಗಿ ಪ್ರತಿಯೊಂದು ಗ್ರಂಥಾಲಯಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯದ ಸಹಾಯದಿಂದ ಓದಿ ಉತ್ತಮ ಸ್ಥಾನಕ್ಕೇರಿರುವ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಎಂದರು.
ತರಬೇತಿ ನಿರ್ವಾಹಕಿ ರಮಾಮಣಿ, ಸಂಪನ್ಮೂಲ ವ್ಯಕ್ತಿ ರಂಗಸ್ವಾಮಿ, ತಾ.ಪಂ ಎಓ ವೆಂಕಟರಾಜು, ಟಿಪಿಓ ರಾಮಾಂಜಿನಯ್ಯ, ವ್ಯವಸ್ಥಾಪಕ ವೆಂಕಟೇಶ್ ಬಾಬು ಸೇರಿದಂತೆ ಮತ್ತಿತರರು ಇದ್ದರು.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
View Comments
ಇದರ ಜೊತೆಗೆ ಗ್ರಂಥಾಲಯದಲ್ಲಿ ವೈಜ್ಞಾನಿಕ ನಿರ್ವಹಣೆಗಾಗಿ ಡಿಡಿಸಿ ಅಥವಾ ಸಿ.ಸಿ. ಯ ಕ್ಲಾಸಿಫಿಕೆಷನ್ ಗೆ ಮೇಲ್ವಿಚಾರಕರಿಗೆ ತರಬೇತಿ ನೀಡಿ ಪುಸ್ತಕಗಳ ವಿಂಗಡಣೆಗೆ ಹೆಚ್ಚು ಒತ್ತು ನೀಡುವುದು ಸೂಕ್ತ.