ಪ್ರತಿ ಗ್ರಂಥಾಲಯವು ಮಕ್ಕಳ‌ ಸ್ನೇಹಿ ಗ್ರಂಥಾಲಯವಾಗಲಿ: ಮೊಬೈಲ್ ದಾಸರಾಗುವುದನ್ನ ತಪ್ಪಿಸಿ ಪುಸ್ತಕ ಹಿಡಿಯುಂತೆ ಪ್ರೇರೆಪಿಸಬೇಕು; ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ

ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್‌ಎಸ್ಎಸ್ಐಆರ್ ಡಿ ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಪಾಲನೆ, ಶಿಸ್ತು ಪಾಲನೆ, ಹೊಸ ಹೊಸ ಮಕ್ಕಳ ನೋಂದಣಿ ಮಾಡಿಸುವುದು, ಮಕ್ಕಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ಓದುವ ಹಾಗೆ ಪ್ರೇರೇಪಿಸಬೇಕು ಎಂದರು.

ಇತ್ತೀಚಿನ ಮಕ್ಕಳು ಮೊಬೈಲ್ ಗೀಳಿಗೆ ದಾಸರಾಗಿದ್ದು, ಅದರಿಂದ ಅವರನ್ನು ಹೊರತಂದು ಗ್ರಂಥಾಲಯದಲ್ಲಿ ಪುಸ್ತಕ ಹಿಡಿದು ಓದುವಂತ ವಾತಾವರಣ ಸೃಷ್ಟಿಸಬೇಕು. ಸಣ್ಣ ಕಥೆ, ಕಥೆ ಪುಸ್ತಕ, ಪರಿಸರ, ನೈರ್ಮಲ್ಯ, ಕ್ರೀಡೆ, ಮನರಂಜನಾ ಪುಸ್ತಕ, ಬಣ್ಣಬಣ್ಣದ ಚಿತ್ರಗಳಿರುವ ಪುಸ್ತಕಗಳನ್ನು ನೀಡಿ ಓದುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಮಕ್ಕಳು ಪುಸ್ತಕಗಳನ್ನು ಓದುವುದರಿಂದ ಮಾನಸಿಕವಾಗಿ ಪರಿಪಕ್ವವಾಗಿ ತನ್ನ ಆಲೋಚನಾ ಕ್ರಮ ಬದಲಾಗುತ್ತದೆ. ಸೃಜನಾತ್ಮಕ ಚಿಂತನೆ ಬೆಳೆಯುತ್ತದೆ. ಅಕ್ಷರ ಜ್ಞಾನ ವೃದ್ಧಿಯಾಗಿ ಭಾಷೆ ಬಗ್ಗೆ ಹಿಡಿತಸಿಗುತ್ತದೆ. ವಿಷಯ ತಿಳಿದುಕೊಂಡಷ್ಟು ಪ್ರಶ್ನೆ, ವಿಮರ್ಶೆ ಮಾಡುವ ಮನೋಭಾವ ಬೆಳೆಯುತ್ತದೆ ಆದ್ದರಿಂದ ವಿಶ್ವಾಸದ ಮೂಲಕ ಮಕ್ಕಳನ್ನು ಗ್ರಂಥಾಲಯದ ಕಡೆ ಸೆಳೆದು ಓದುವ ಹವ್ಯಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ದೇಶದ ಅಭಿವೃದ್ಧಿಗೆ ಗ್ರಂಥಾಲಯಗಳು ಮಹತ್ತರವಾದ ಪಾತ್ರ ವಹಿಸುತ್ತವೆ ಎಂದರು.

2021ರಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಯೋಜನೆಯಡಿ ಗ್ರಂಥಾಲಯದಲ್ಲಿ ಉಚಿತ ನೋಂದಣಿ ಮಾಡಿಸುವ ಮೂಲಕ ಗ್ರಂಥಾಲಯದತ್ತ ಹೆಜ್ಜೆ ಹಾಕುವಂತೆ ಮಾಡಲಾಯಿತು.

ಸಾರ್ವಜನಿಕರನ್ನು ವಿಶ್ವಾಸ, ಸೌಜನ್ಯದಿಂದ ಗ್ರಂಥಾಲಯಕ್ಕೆ ಸೆಳೆಯಬಹುದು. ವಿಶೇಷ ಚೇತನರಿಗಾಗಿ ಪ್ರತಿಯೊಂದು ಗ್ರಂಥಾಲಯಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯದ ಸಹಾಯದಿಂದ ಓದಿ ಉತ್ತಮ ಸ್ಥಾನಕ್ಕೇರಿರುವ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಎಂದರು.

ತರಬೇತಿ ನಿರ್ವಾಹಕಿ ರಮಾಮಣಿ, ಸಂಪನ್ಮೂಲ ವ್ಯಕ್ತಿ ರಂಗಸ್ವಾಮಿ, ತಾ.ಪಂ ಎಓ ವೆಂಕಟರಾಜು, ಟಿಪಿಓ ರಾಮಾಂಜಿನಯ್ಯ, ವ್ಯವಸ್ಥಾಪಕ ವೆಂಕಟೇಶ್ ಬಾಬು‌ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

View Comments

  • ಇದರ ಜೊತೆಗೆ ಗ್ರಂಥಾಲಯದಲ್ಲಿ ವೈಜ್ಞಾನಿಕ ನಿರ್ವಹಣೆಗಾಗಿ ಡಿಡಿಸಿ ಅಥವಾ ಸಿ.ಸಿ. ಯ ಕ್ಲಾಸಿಫಿಕೆಷನ್ ಗೆ ಮೇಲ್ವಿಚಾರಕರಿಗೆ ತರಬೇತಿ ನೀಡಿ ಪುಸ್ತಕಗಳ ವಿಂಗಡಣೆಗೆ ಹೆಚ್ಚು ಒತ್ತು ನೀಡುವುದು ಸೂಕ್ತ.

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

4 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

5 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

18 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

19 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

19 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago