ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್ಎಸ್ಎಸ್ಐಆರ್ ಡಿ ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಪಾಲನೆ, ಶಿಸ್ತು ಪಾಲನೆ, ಹೊಸ ಹೊಸ ಮಕ್ಕಳ ನೋಂದಣಿ ಮಾಡಿಸುವುದು, ಮಕ್ಕಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ಓದುವ ಹಾಗೆ ಪ್ರೇರೇಪಿಸಬೇಕು ಎಂದರು.
ಮಕ್ಕಳು ಪುಸ್ತಕಗಳನ್ನು ಓದುವುದರಿಂದ ಮಾನಸಿಕವಾಗಿ ಪರಿಪಕ್ವವಾಗಿ ತನ್ನ ಆಲೋಚನಾ ಕ್ರಮ ಬದಲಾಗುತ್ತದೆ. ಸೃಜನಾತ್ಮಕ ಚಿಂತನೆ ಬೆಳೆಯುತ್ತದೆ. ಅಕ್ಷರ ಜ್ಞಾನ ವೃದ್ಧಿಯಾಗಿ ಭಾಷೆ ಬಗ್ಗೆ ಹಿಡಿತಸಿಗುತ್ತದೆ. ವಿಷಯ ತಿಳಿದುಕೊಂಡಷ್ಟು ಪ್ರಶ್ನೆ, ವಿಮರ್ಶೆ ಮಾಡುವ ಮನೋಭಾವ ಬೆಳೆಯುತ್ತದೆ ಆದ್ದರಿಂದ ವಿಶ್ವಾಸದ ಮೂಲಕ ಮಕ್ಕಳನ್ನು ಗ್ರಂಥಾಲಯದ ಕಡೆ ಸೆಳೆದು ಓದುವ ಹವ್ಯಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.
2021ರಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಯೋಜನೆಯಡಿ ಗ್ರಂಥಾಲಯದಲ್ಲಿ ಉಚಿತ ನೋಂದಣಿ ಮಾಡಿಸುವ ಮೂಲಕ ಗ್ರಂಥಾಲಯದತ್ತ ಹೆಜ್ಜೆ ಹಾಕುವಂತೆ ಮಾಡಲಾಯಿತು.
ಸಾರ್ವಜನಿಕರನ್ನು ವಿಶ್ವಾಸ, ಸೌಜನ್ಯದಿಂದ ಗ್ರಂಥಾಲಯಕ್ಕೆ ಸೆಳೆಯಬಹುದು. ವಿಶೇಷ ಚೇತನರಿಗಾಗಿ ಪ್ರತಿಯೊಂದು ಗ್ರಂಥಾಲಯಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯದ ಸಹಾಯದಿಂದ ಓದಿ ಉತ್ತಮ ಸ್ಥಾನಕ್ಕೇರಿರುವ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಎಂದರು.
ತರಬೇತಿ ನಿರ್ವಾಹಕಿ ರಮಾಮಣಿ, ಸಂಪನ್ಮೂಲ ವ್ಯಕ್ತಿ ರಂಗಸ್ವಾಮಿ, ತಾ.ಪಂ ಎಓ ವೆಂಕಟರಾಜು, ಟಿಪಿಓ ರಾಮಾಂಜಿನಯ್ಯ, ವ್ಯವಸ್ಥಾಪಕ ವೆಂಕಟೇಶ್ ಬಾಬು ಸೇರಿದಂತೆ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
View Comments
ಇದರ ಜೊತೆಗೆ ಗ್ರಂಥಾಲಯದಲ್ಲಿ ವೈಜ್ಞಾನಿಕ ನಿರ್ವಹಣೆಗಾಗಿ ಡಿಡಿಸಿ ಅಥವಾ ಸಿ.ಸಿ. ಯ ಕ್ಲಾಸಿಫಿಕೆಷನ್ ಗೆ ಮೇಲ್ವಿಚಾರಕರಿಗೆ ತರಬೇತಿ ನೀಡಿ ಪುಸ್ತಕಗಳ ವಿಂಗಡಣೆಗೆ ಹೆಚ್ಚು ಒತ್ತು ನೀಡುವುದು ಸೂಕ್ತ.