ಪ್ರತಿ ಗ್ರಂಥಾಲಯವು ಮಕ್ಕಳ‌ ಸ್ನೇಹಿ ಗ್ರಂಥಾಲಯವಾಗಲಿ: ಮೊಬೈಲ್ ದಾಸರಾಗುವುದನ್ನ ತಪ್ಪಿಸಿ ಪುಸ್ತಕ ಹಿಡಿಯುಂತೆ ಪ್ರೇರೆಪಿಸಬೇಕು; ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ

ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್‌ಎಸ್ಎಸ್ಐಆರ್ ಡಿ ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಪಾಲನೆ, ಶಿಸ್ತು ಪಾಲನೆ, ಹೊಸ ಹೊಸ ಮಕ್ಕಳ ನೋಂದಣಿ ಮಾಡಿಸುವುದು, ಮಕ್ಕಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ಓದುವ ಹಾಗೆ ಪ್ರೇರೇಪಿಸಬೇಕು ಎಂದರು.

ಇತ್ತೀಚಿನ ಮಕ್ಕಳು ಮೊಬೈಲ್ ಗೀಳಿಗೆ ದಾಸರಾಗಿದ್ದು, ಅದರಿಂದ ಅವರನ್ನು ಹೊರತಂದು ಗ್ರಂಥಾಲಯದಲ್ಲಿ ಪುಸ್ತಕ ಹಿಡಿದು ಓದುವಂತ ವಾತಾವರಣ ಸೃಷ್ಟಿಸಬೇಕು. ಸಣ್ಣ ಕಥೆ, ಕಥೆ ಪುಸ್ತಕ, ಪರಿಸರ, ನೈರ್ಮಲ್ಯ, ಕ್ರೀಡೆ, ಮನರಂಜನಾ ಪುಸ್ತಕ, ಬಣ್ಣಬಣ್ಣದ ಚಿತ್ರಗಳಿರುವ ಪುಸ್ತಕಗಳನ್ನು ನೀಡಿ ಓದುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಮಕ್ಕಳು ಪುಸ್ತಕಗಳನ್ನು ಓದುವುದರಿಂದ ಮಾನಸಿಕವಾಗಿ ಪರಿಪಕ್ವವಾಗಿ ತನ್ನ ಆಲೋಚನಾ ಕ್ರಮ ಬದಲಾಗುತ್ತದೆ. ಸೃಜನಾತ್ಮಕ ಚಿಂತನೆ ಬೆಳೆಯುತ್ತದೆ. ಅಕ್ಷರ ಜ್ಞಾನ ವೃದ್ಧಿಯಾಗಿ ಭಾಷೆ ಬಗ್ಗೆ ಹಿಡಿತಸಿಗುತ್ತದೆ. ವಿಷಯ ತಿಳಿದುಕೊಂಡಷ್ಟು ಪ್ರಶ್ನೆ, ವಿಮರ್ಶೆ ಮಾಡುವ ಮನೋಭಾವ ಬೆಳೆಯುತ್ತದೆ ಆದ್ದರಿಂದ ವಿಶ್ವಾಸದ ಮೂಲಕ ಮಕ್ಕಳನ್ನು ಗ್ರಂಥಾಲಯದ ಕಡೆ ಸೆಳೆದು ಓದುವ ಹವ್ಯಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ದೇಶದ ಅಭಿವೃದ್ಧಿಗೆ ಗ್ರಂಥಾಲಯಗಳು ಮಹತ್ತರವಾದ ಪಾತ್ರ ವಹಿಸುತ್ತವೆ ಎಂದರು.

2021ರಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಯೋಜನೆಯಡಿ ಗ್ರಂಥಾಲಯದಲ್ಲಿ ಉಚಿತ ನೋಂದಣಿ ಮಾಡಿಸುವ ಮೂಲಕ ಗ್ರಂಥಾಲಯದತ್ತ ಹೆಜ್ಜೆ ಹಾಕುವಂತೆ ಮಾಡಲಾಯಿತು.

ಸಾರ್ವಜನಿಕರನ್ನು ವಿಶ್ವಾಸ, ಸೌಜನ್ಯದಿಂದ ಗ್ರಂಥಾಲಯಕ್ಕೆ ಸೆಳೆಯಬಹುದು. ವಿಶೇಷ ಚೇತನರಿಗಾಗಿ ಪ್ರತಿಯೊಂದು ಗ್ರಂಥಾಲಯಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯದ ಸಹಾಯದಿಂದ ಓದಿ ಉತ್ತಮ ಸ್ಥಾನಕ್ಕೇರಿರುವ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಎಂದರು.

ತರಬೇತಿ ನಿರ್ವಾಹಕಿ ರಮಾಮಣಿ, ಸಂಪನ್ಮೂಲ ವ್ಯಕ್ತಿ ರಂಗಸ್ವಾಮಿ, ತಾ.ಪಂ ಎಓ ವೆಂಕಟರಾಜು, ಟಿಪಿಓ ರಾಮಾಂಜಿನಯ್ಯ, ವ್ಯವಸ್ಥಾಪಕ ವೆಂಕಟೇಶ್ ಬಾಬು‌ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

View Comments

  • ಇದರ ಜೊತೆಗೆ ಗ್ರಂಥಾಲಯದಲ್ಲಿ ವೈಜ್ಞಾನಿಕ ನಿರ್ವಹಣೆಗಾಗಿ ಡಿಡಿಸಿ ಅಥವಾ ಸಿ.ಸಿ. ಯ ಕ್ಲಾಸಿಫಿಕೆಷನ್ ಗೆ ಮೇಲ್ವಿಚಾರಕರಿಗೆ ತರಬೇತಿ ನೀಡಿ ಪುಸ್ತಕಗಳ ವಿಂಗಡಣೆಗೆ ಹೆಚ್ಚು ಒತ್ತು ನೀಡುವುದು ಸೂಕ್ತ.

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

4 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

5 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago