ಪ್ರತಿ ಗ್ರಂಥಾಲಯವು ಮಕ್ಕಳ‌ ಸ್ನೇಹಿ ಗ್ರಂಥಾಲಯವಾಗಲಿ: ಮೊಬೈಲ್ ದಾಸರಾಗುವುದನ್ನ ತಪ್ಪಿಸಿ ಪುಸ್ತಕ ಹಿಡಿಯುಂತೆ ಪ್ರೇರೆಪಿಸಬೇಕು; ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ

ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್‌ಎಸ್ಎಸ್ಐಆರ್ ಡಿ ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಪಾಲನೆ, ಶಿಸ್ತು ಪಾಲನೆ, ಹೊಸ ಹೊಸ ಮಕ್ಕಳ ನೋಂದಣಿ ಮಾಡಿಸುವುದು, ಮಕ್ಕಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ಓದುವ ಹಾಗೆ ಪ್ರೇರೇಪಿಸಬೇಕು ಎಂದರು.

ಇತ್ತೀಚಿನ ಮಕ್ಕಳು ಮೊಬೈಲ್ ಗೀಳಿಗೆ ದಾಸರಾಗಿದ್ದು, ಅದರಿಂದ ಅವರನ್ನು ಹೊರತಂದು ಗ್ರಂಥಾಲಯದಲ್ಲಿ ಪುಸ್ತಕ ಹಿಡಿದು ಓದುವಂತ ವಾತಾವರಣ ಸೃಷ್ಟಿಸಬೇಕು. ಸಣ್ಣ ಕಥೆ, ಕಥೆ ಪುಸ್ತಕ, ಪರಿಸರ, ನೈರ್ಮಲ್ಯ, ಕ್ರೀಡೆ, ಮನರಂಜನಾ ಪುಸ್ತಕ, ಬಣ್ಣಬಣ್ಣದ ಚಿತ್ರಗಳಿರುವ ಪುಸ್ತಕಗಳನ್ನು ನೀಡಿ ಓದುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಮಕ್ಕಳು ಪುಸ್ತಕಗಳನ್ನು ಓದುವುದರಿಂದ ಮಾನಸಿಕವಾಗಿ ಪರಿಪಕ್ವವಾಗಿ ತನ್ನ ಆಲೋಚನಾ ಕ್ರಮ ಬದಲಾಗುತ್ತದೆ. ಸೃಜನಾತ್ಮಕ ಚಿಂತನೆ ಬೆಳೆಯುತ್ತದೆ. ಅಕ್ಷರ ಜ್ಞಾನ ವೃದ್ಧಿಯಾಗಿ ಭಾಷೆ ಬಗ್ಗೆ ಹಿಡಿತಸಿಗುತ್ತದೆ. ವಿಷಯ ತಿಳಿದುಕೊಂಡಷ್ಟು ಪ್ರಶ್ನೆ, ವಿಮರ್ಶೆ ಮಾಡುವ ಮನೋಭಾವ ಬೆಳೆಯುತ್ತದೆ ಆದ್ದರಿಂದ ವಿಶ್ವಾಸದ ಮೂಲಕ ಮಕ್ಕಳನ್ನು ಗ್ರಂಥಾಲಯದ ಕಡೆ ಸೆಳೆದು ಓದುವ ಹವ್ಯಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ದೇಶದ ಅಭಿವೃದ್ಧಿಗೆ ಗ್ರಂಥಾಲಯಗಳು ಮಹತ್ತರವಾದ ಪಾತ್ರ ವಹಿಸುತ್ತವೆ ಎಂದರು.

2021ರಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಯೋಜನೆಯಡಿ ಗ್ರಂಥಾಲಯದಲ್ಲಿ ಉಚಿತ ನೋಂದಣಿ ಮಾಡಿಸುವ ಮೂಲಕ ಗ್ರಂಥಾಲಯದತ್ತ ಹೆಜ್ಜೆ ಹಾಕುವಂತೆ ಮಾಡಲಾಯಿತು.

ಸಾರ್ವಜನಿಕರನ್ನು ವಿಶ್ವಾಸ, ಸೌಜನ್ಯದಿಂದ ಗ್ರಂಥಾಲಯಕ್ಕೆ ಸೆಳೆಯಬಹುದು. ವಿಶೇಷ ಚೇತನರಿಗಾಗಿ ಪ್ರತಿಯೊಂದು ಗ್ರಂಥಾಲಯಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯದ ಸಹಾಯದಿಂದ ಓದಿ ಉತ್ತಮ ಸ್ಥಾನಕ್ಕೇರಿರುವ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಎಂದರು.

ತರಬೇತಿ ನಿರ್ವಾಹಕಿ ರಮಾಮಣಿ, ಸಂಪನ್ಮೂಲ ವ್ಯಕ್ತಿ ರಂಗಸ್ವಾಮಿ, ತಾ.ಪಂ ಎಓ ವೆಂಕಟರಾಜು, ಟಿಪಿಓ ರಾಮಾಂಜಿನಯ್ಯ, ವ್ಯವಸ್ಥಾಪಕ ವೆಂಕಟೇಶ್ ಬಾಬು‌ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

View Comments

  • ಇದರ ಜೊತೆಗೆ ಗ್ರಂಥಾಲಯದಲ್ಲಿ ವೈಜ್ಞಾನಿಕ ನಿರ್ವಹಣೆಗಾಗಿ ಡಿಡಿಸಿ ಅಥವಾ ಸಿ.ಸಿ. ಯ ಕ್ಲಾಸಿಫಿಕೆಷನ್ ಗೆ ಮೇಲ್ವಿಚಾರಕರಿಗೆ ತರಬೇತಿ ನೀಡಿ ಪುಸ್ತಕಗಳ ವಿಂಗಡಣೆಗೆ ಹೆಚ್ಚು ಒತ್ತು ನೀಡುವುದು ಸೂಕ್ತ.

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

9 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago