ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್ಎಸ್ಎಸ್ಐಆರ್ ಡಿ ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಪಾಲನೆ, ಶಿಸ್ತು ಪಾಲನೆ, ಹೊಸ ಹೊಸ ಮಕ್ಕಳ ನೋಂದಣಿ ಮಾಡಿಸುವುದು, ಮಕ್ಕಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ಓದುವ ಹಾಗೆ ಪ್ರೇರೇಪಿಸಬೇಕು ಎಂದರು.
ಮಕ್ಕಳು ಪುಸ್ತಕಗಳನ್ನು ಓದುವುದರಿಂದ ಮಾನಸಿಕವಾಗಿ ಪರಿಪಕ್ವವಾಗಿ ತನ್ನ ಆಲೋಚನಾ ಕ್ರಮ ಬದಲಾಗುತ್ತದೆ. ಸೃಜನಾತ್ಮಕ ಚಿಂತನೆ ಬೆಳೆಯುತ್ತದೆ. ಅಕ್ಷರ ಜ್ಞಾನ ವೃದ್ಧಿಯಾಗಿ ಭಾಷೆ ಬಗ್ಗೆ ಹಿಡಿತಸಿಗುತ್ತದೆ. ವಿಷಯ ತಿಳಿದುಕೊಂಡಷ್ಟು ಪ್ರಶ್ನೆ, ವಿಮರ್ಶೆ ಮಾಡುವ ಮನೋಭಾವ ಬೆಳೆಯುತ್ತದೆ ಆದ್ದರಿಂದ ವಿಶ್ವಾಸದ ಮೂಲಕ ಮಕ್ಕಳನ್ನು ಗ್ರಂಥಾಲಯದ ಕಡೆ ಸೆಳೆದು ಓದುವ ಹವ್ಯಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.
2021ರಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಯೋಜನೆಯಡಿ ಗ್ರಂಥಾಲಯದಲ್ಲಿ ಉಚಿತ ನೋಂದಣಿ ಮಾಡಿಸುವ ಮೂಲಕ ಗ್ರಂಥಾಲಯದತ್ತ ಹೆಜ್ಜೆ ಹಾಕುವಂತೆ ಮಾಡಲಾಯಿತು.
ಸಾರ್ವಜನಿಕರನ್ನು ವಿಶ್ವಾಸ, ಸೌಜನ್ಯದಿಂದ ಗ್ರಂಥಾಲಯಕ್ಕೆ ಸೆಳೆಯಬಹುದು. ವಿಶೇಷ ಚೇತನರಿಗಾಗಿ ಪ್ರತಿಯೊಂದು ಗ್ರಂಥಾಲಯಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯದ ಸಹಾಯದಿಂದ ಓದಿ ಉತ್ತಮ ಸ್ಥಾನಕ್ಕೇರಿರುವ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಎಂದರು.
ತರಬೇತಿ ನಿರ್ವಾಹಕಿ ರಮಾಮಣಿ, ಸಂಪನ್ಮೂಲ ವ್ಯಕ್ತಿ ರಂಗಸ್ವಾಮಿ, ತಾ.ಪಂ ಎಓ ವೆಂಕಟರಾಜು, ಟಿಪಿಓ ರಾಮಾಂಜಿನಯ್ಯ, ವ್ಯವಸ್ಥಾಪಕ ವೆಂಕಟೇಶ್ ಬಾಬು ಸೇರಿದಂತೆ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
View Comments
ಇದರ ಜೊತೆಗೆ ಗ್ರಂಥಾಲಯದಲ್ಲಿ ವೈಜ್ಞಾನಿಕ ನಿರ್ವಹಣೆಗಾಗಿ ಡಿಡಿಸಿ ಅಥವಾ ಸಿ.ಸಿ. ಯ ಕ್ಲಾಸಿಫಿಕೆಷನ್ ಗೆ ಮೇಲ್ವಿಚಾರಕರಿಗೆ ತರಬೇತಿ ನೀಡಿ ಪುಸ್ತಕಗಳ ವಿಂಗಡಣೆಗೆ ಹೆಚ್ಚು ಒತ್ತು ನೀಡುವುದು ಸೂಕ್ತ.