ಪ್ರತಿ ಗ್ರಂಥಾಲಯವು ಮಕ್ಕಳ‌ ಸ್ನೇಹಿ ಗ್ರಂಥಾಲಯವಾಗಲಿ: ಮೊಬೈಲ್ ದಾಸರಾಗುವುದನ್ನ ತಪ್ಪಿಸಿ ಪುಸ್ತಕ ಹಿಡಿಯುಂತೆ ಪ್ರೇರೆಪಿಸಬೇಕು; ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ

ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್‌ಎಸ್ಎಸ್ಐಆರ್ ಡಿ ಜಿಲ್ಲಾ ತರಬೇತಿ ಸಂಯೋಜಕ ಬೈಲಾಂಜಿನ ಮೂರ್ತಿ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಮೂರು ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಪಾಲನೆ, ಶಿಸ್ತು ಪಾಲನೆ, ಹೊಸ ಹೊಸ ಮಕ್ಕಳ ನೋಂದಣಿ ಮಾಡಿಸುವುದು, ಮಕ್ಕಳು ಪ್ರತಿನಿತ್ಯ ಗ್ರಂಥಾಲಯಕ್ಕೆ ಬಂದು ಓದುವ ಹಾಗೆ ಪ್ರೇರೇಪಿಸಬೇಕು ಎಂದರು.

ಇತ್ತೀಚಿನ ಮಕ್ಕಳು ಮೊಬೈಲ್ ಗೀಳಿಗೆ ದಾಸರಾಗಿದ್ದು, ಅದರಿಂದ ಅವರನ್ನು ಹೊರತಂದು ಗ್ರಂಥಾಲಯದಲ್ಲಿ ಪುಸ್ತಕ ಹಿಡಿದು ಓದುವಂತ ವಾತಾವರಣ ಸೃಷ್ಟಿಸಬೇಕು. ಸಣ್ಣ ಕಥೆ, ಕಥೆ ಪುಸ್ತಕ, ಪರಿಸರ, ನೈರ್ಮಲ್ಯ, ಕ್ರೀಡೆ, ಮನರಂಜನಾ ಪುಸ್ತಕ, ಬಣ್ಣಬಣ್ಣದ ಚಿತ್ರಗಳಿರುವ ಪುಸ್ತಕಗಳನ್ನು ನೀಡಿ ಓದುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಮಕ್ಕಳು ಪುಸ್ತಕಗಳನ್ನು ಓದುವುದರಿಂದ ಮಾನಸಿಕವಾಗಿ ಪರಿಪಕ್ವವಾಗಿ ತನ್ನ ಆಲೋಚನಾ ಕ್ರಮ ಬದಲಾಗುತ್ತದೆ. ಸೃಜನಾತ್ಮಕ ಚಿಂತನೆ ಬೆಳೆಯುತ್ತದೆ. ಅಕ್ಷರ ಜ್ಞಾನ ವೃದ್ಧಿಯಾಗಿ ಭಾಷೆ ಬಗ್ಗೆ ಹಿಡಿತಸಿಗುತ್ತದೆ. ವಿಷಯ ತಿಳಿದುಕೊಂಡಷ್ಟು ಪ್ರಶ್ನೆ, ವಿಮರ್ಶೆ ಮಾಡುವ ಮನೋಭಾವ ಬೆಳೆಯುತ್ತದೆ ಆದ್ದರಿಂದ ವಿಶ್ವಾಸದ ಮೂಲಕ ಮಕ್ಕಳನ್ನು ಗ್ರಂಥಾಲಯದ ಕಡೆ ಸೆಳೆದು ಓದುವ ಹವ್ಯಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ದೇಶದ ಅಭಿವೃದ್ಧಿಗೆ ಗ್ರಂಥಾಲಯಗಳು ಮಹತ್ತರವಾದ ಪಾತ್ರ ವಹಿಸುತ್ತವೆ ಎಂದರು.

2021ರಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಯೋಜನೆಯಡಿ ಗ್ರಂಥಾಲಯದಲ್ಲಿ ಉಚಿತ ನೋಂದಣಿ ಮಾಡಿಸುವ ಮೂಲಕ ಗ್ರಂಥಾಲಯದತ್ತ ಹೆಜ್ಜೆ ಹಾಕುವಂತೆ ಮಾಡಲಾಯಿತು.

ಸಾರ್ವಜನಿಕರನ್ನು ವಿಶ್ವಾಸ, ಸೌಜನ್ಯದಿಂದ ಗ್ರಂಥಾಲಯಕ್ಕೆ ಸೆಳೆಯಬಹುದು. ವಿಶೇಷ ಚೇತನರಿಗಾಗಿ ಪ್ರತಿಯೊಂದು ಗ್ರಂಥಾಲಯಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಗ್ರಂಥಾಲಯದ ಸಹಾಯದಿಂದ ಓದಿ ಉತ್ತಮ ಸ್ಥಾನಕ್ಕೇರಿರುವ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಎಂದರು.

ತರಬೇತಿ ನಿರ್ವಾಹಕಿ ರಮಾಮಣಿ, ಸಂಪನ್ಮೂಲ ವ್ಯಕ್ತಿ ರಂಗಸ್ವಾಮಿ, ತಾ.ಪಂ ಎಓ ವೆಂಕಟರಾಜು, ಟಿಪಿಓ ರಾಮಾಂಜಿನಯ್ಯ, ವ್ಯವಸ್ಥಾಪಕ ವೆಂಕಟೇಶ್ ಬಾಬು‌ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

View Comments

  • ಇದರ ಜೊತೆಗೆ ಗ್ರಂಥಾಲಯದಲ್ಲಿ ವೈಜ್ಞಾನಿಕ ನಿರ್ವಹಣೆಗಾಗಿ ಡಿಡಿಸಿ ಅಥವಾ ಸಿ.ಸಿ. ಯ ಕ್ಲಾಸಿಫಿಕೆಷನ್ ಗೆ ಮೇಲ್ವಿಚಾರಕರಿಗೆ ತರಬೇತಿ ನೀಡಿ ಪುಸ್ತಕಗಳ ವಿಂಗಡಣೆಗೆ ಹೆಚ್ಚು ಒತ್ತು ನೀಡುವುದು ಸೂಕ್ತ.

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 hour ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

4 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

17 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

18 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

20 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

22 hours ago