ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಒಂದೇ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಜನಸ್ಪಂದನ/ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನರ ಅಹವಾಲನ್ನು ಆಲಿಸಿ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಜಿಲ್ಲಾಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರತಕ್ಕದ್ದು ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲು ಆಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಂಬಂಧಿತ ಉಪವಿಭಾಗಾಧಿಕಾರಿಗಳು ಒಂದೊಂದು ಮಾಹೆ ಒಂದೊಂದು ತಾಲ್ಲೂಕಿನಲ್ಲಿ ಹಾಜರಿರಬೇಕು. ಜನಸ್ಪಂದನ ಕಾರ್ಯಕ್ರಮದ ಸಮಯ ಹಾಗೂ ದಿನಾಂಕ, ಸ್ಥಳವನ್ನು ಆಯಾ ತಾಲ್ಲೂಕು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಚುರ ಪಡಿಸಲಾಗುವುದು.

*ಆನ್ಲೈನ್ ಮೂಲಕ ಅಹವಾಲು ದಾಖಲಿಸಿ*
ಜಿಲ್ಲೆಯ ಎಲ್ಲಾ ರೈತಾಪಿ ವರ್ಗದವರಿಗೆ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಜನತೆಗೆ ಸಾಮಾಜಿಕ ಶೈಕ್ಷಣಿಕ ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ವಿವಿಧ ಇಲಾಖೆಗಳಲ್ಲಿ ದೊರೆಯಬೇಕಾದ ಸೌಲಭ್ಯಗಳು ನಿಗದಿತ ಅವಧಿಯೊಳಗೆ ದೊರೆಯದೆ ಇದ್ದಾಗ ತಮ್ಮ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣ ತಂತ್ರಾಂಶ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದೆ.

ಅದರಂತೆ ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಯು ಜನಸ್ಪಂದನ ಪೋರ್ಟಲ್ https://espandana.karnataka.gov.in ಅಥವಾ https://ipgrs.karnataka.gov.in, https://play.google.com/store/apps/details?id=com.csg.ipgrs ನಲ್ಲಿಯೂ ಲಭ್ಯವಿರುತ್ತದೆ. ಇದರಲ್ಲಿ ಸಾರ್ವಜನಿಕರು ನೇರವಾಗಿ ತಮ್ಮ ಹವಾಲುಗಳನ್ನು ತಂತ್ರಾಂಶದ ಮೂಲಕ ದಾಖಲಿಸಬಹುದಾಗಿರುತ್ತದೆ.

ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಗೆ ಮೀಸಲಾದ 1902 ಸಹಾಯವಾಣಿಯು ಸಹ ನಾಗರಿಕರಿಗೆ ಲಭ್ಯವಿರುತ್ತದೆ. ಅಂತರ್ಜಾಲ ವ್ಯವಸ್ಥೆ ಇಲ್ಲದ ಕುಗ್ರಾಮಗಳಿಂದಲೂ ಸಹ ಸಾರ್ವಜನಿಕರು 1902 ಸಹಾಯವಾಣಿಗೆ ಕರೆ ಮಾಡಿ ದೂರು/ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ಮಿತ್ರತ್ವ ಅಥವಾ ಸಹಜತೆಗೆ ದ್ರೋಹ....... ಒಂದು ಸಲಹೆ ಮತ್ತು ಮನವಿ..... ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ…

4 hours ago

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

1 day ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

2 days ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

2 days ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

2 days ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 days ago