ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಒಂದೇ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಜನಸ್ಪಂದನ/ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನರ ಅಹವಾಲನ್ನು ಆಲಿಸಿ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಜಿಲ್ಲಾಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರತಕ್ಕದ್ದು ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲು ಆಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಂಬಂಧಿತ ಉಪವಿಭಾಗಾಧಿಕಾರಿಗಳು ಒಂದೊಂದು ಮಾಹೆ ಒಂದೊಂದು ತಾಲ್ಲೂಕಿನಲ್ಲಿ ಹಾಜರಿರಬೇಕು. ಜನಸ್ಪಂದನ ಕಾರ್ಯಕ್ರಮದ ಸಮಯ ಹಾಗೂ ದಿನಾಂಕ, ಸ್ಥಳವನ್ನು ಆಯಾ ತಾಲ್ಲೂಕು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಚುರ ಪಡಿಸಲಾಗುವುದು.

*ಆನ್ಲೈನ್ ಮೂಲಕ ಅಹವಾಲು ದಾಖಲಿಸಿ*
ಜಿಲ್ಲೆಯ ಎಲ್ಲಾ ರೈತಾಪಿ ವರ್ಗದವರಿಗೆ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಜನತೆಗೆ ಸಾಮಾಜಿಕ ಶೈಕ್ಷಣಿಕ ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ವಿವಿಧ ಇಲಾಖೆಗಳಲ್ಲಿ ದೊರೆಯಬೇಕಾದ ಸೌಲಭ್ಯಗಳು ನಿಗದಿತ ಅವಧಿಯೊಳಗೆ ದೊರೆಯದೆ ಇದ್ದಾಗ ತಮ್ಮ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣ ತಂತ್ರಾಂಶ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದೆ.

ಅದರಂತೆ ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಯು ಜನಸ್ಪಂದನ ಪೋರ್ಟಲ್ https://espandana.karnataka.gov.in ಅಥವಾ https://ipgrs.karnataka.gov.in, https://play.google.com/store/apps/details?id=com.csg.ipgrs ನಲ್ಲಿಯೂ ಲಭ್ಯವಿರುತ್ತದೆ. ಇದರಲ್ಲಿ ಸಾರ್ವಜನಿಕರು ನೇರವಾಗಿ ತಮ್ಮ ಹವಾಲುಗಳನ್ನು ತಂತ್ರಾಂಶದ ಮೂಲಕ ದಾಖಲಿಸಬಹುದಾಗಿರುತ್ತದೆ.

ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಗೆ ಮೀಸಲಾದ 1902 ಸಹಾಯವಾಣಿಯು ಸಹ ನಾಗರಿಕರಿಗೆ ಲಭ್ಯವಿರುತ್ತದೆ. ಅಂತರ್ಜಾಲ ವ್ಯವಸ್ಥೆ ಇಲ್ಲದ ಕುಗ್ರಾಮಗಳಿಂದಲೂ ಸಹ ಸಾರ್ವಜನಿಕರು 1902 ಸಹಾಯವಾಣಿಗೆ ಕರೆ ಮಾಡಿ ದೂರು/ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

9 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

9 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

14 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

18 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

22 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 days ago