ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಒಂದೇ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಜನಸ್ಪಂದನ/ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನರ ಅಹವಾಲನ್ನು ಆಲಿಸಿ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಜಿಲ್ಲಾಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರತಕ್ಕದ್ದು ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲು ಆಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಂಬಂಧಿತ ಉಪವಿಭಾಗಾಧಿಕಾರಿಗಳು ಒಂದೊಂದು ಮಾಹೆ ಒಂದೊಂದು ತಾಲ್ಲೂಕಿನಲ್ಲಿ ಹಾಜರಿರಬೇಕು. ಜನಸ್ಪಂದನ ಕಾರ್ಯಕ್ರಮದ ಸಮಯ ಹಾಗೂ ದಿನಾಂಕ, ಸ್ಥಳವನ್ನು ಆಯಾ ತಾಲ್ಲೂಕು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಚುರ ಪಡಿಸಲಾಗುವುದು.

*ಆನ್ಲೈನ್ ಮೂಲಕ ಅಹವಾಲು ದಾಖಲಿಸಿ*
ಜಿಲ್ಲೆಯ ಎಲ್ಲಾ ರೈತಾಪಿ ವರ್ಗದವರಿಗೆ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಜನತೆಗೆ ಸಾಮಾಜಿಕ ಶೈಕ್ಷಣಿಕ ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ವಿವಿಧ ಇಲಾಖೆಗಳಲ್ಲಿ ದೊರೆಯಬೇಕಾದ ಸೌಲಭ್ಯಗಳು ನಿಗದಿತ ಅವಧಿಯೊಳಗೆ ದೊರೆಯದೆ ಇದ್ದಾಗ ತಮ್ಮ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣ ತಂತ್ರಾಂಶ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದೆ.

ಅದರಂತೆ ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಯು ಜನಸ್ಪಂದನ ಪೋರ್ಟಲ್ https://espandana.karnataka.gov.in ಅಥವಾ https://ipgrs.karnataka.gov.in, https://play.google.com/store/apps/details?id=com.csg.ipgrs ನಲ್ಲಿಯೂ ಲಭ್ಯವಿರುತ್ತದೆ. ಇದರಲ್ಲಿ ಸಾರ್ವಜನಿಕರು ನೇರವಾಗಿ ತಮ್ಮ ಹವಾಲುಗಳನ್ನು ತಂತ್ರಾಂಶದ ಮೂಲಕ ದಾಖಲಿಸಬಹುದಾಗಿರುತ್ತದೆ.

ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಗೆ ಮೀಸಲಾದ 1902 ಸಹಾಯವಾಣಿಯು ಸಹ ನಾಗರಿಕರಿಗೆ ಲಭ್ಯವಿರುತ್ತದೆ. ಅಂತರ್ಜಾಲ ವ್ಯವಸ್ಥೆ ಇಲ್ಲದ ಕುಗ್ರಾಮಗಳಿಂದಲೂ ಸಹ ಸಾರ್ವಜನಿಕರು 1902 ಸಹಾಯವಾಣಿಗೆ ಕರೆ ಮಾಡಿ ದೂರು/ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago