ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಒಂದೇ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಜನಸ್ಪಂದನ/ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನರ ಅಹವಾಲನ್ನು ಆಲಿಸಿ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಜಿಲ್ಲಾಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರತಕ್ಕದ್ದು ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲು ಆಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಂಬಂಧಿತ ಉಪವಿಭಾಗಾಧಿಕಾರಿಗಳು ಒಂದೊಂದು ಮಾಹೆ ಒಂದೊಂದು ತಾಲ್ಲೂಕಿನಲ್ಲಿ ಹಾಜರಿರಬೇಕು. ಜನಸ್ಪಂದನ ಕಾರ್ಯಕ್ರಮದ ಸಮಯ ಹಾಗೂ ದಿನಾಂಕ, ಸ್ಥಳವನ್ನು ಆಯಾ ತಾಲ್ಲೂಕು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಚುರ ಪಡಿಸಲಾಗುವುದು.

*ಆನ್ಲೈನ್ ಮೂಲಕ ಅಹವಾಲು ದಾಖಲಿಸಿ*
ಜಿಲ್ಲೆಯ ಎಲ್ಲಾ ರೈತಾಪಿ ವರ್ಗದವರಿಗೆ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಜನತೆಗೆ ಸಾಮಾಜಿಕ ಶೈಕ್ಷಣಿಕ ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ವಿವಿಧ ಇಲಾಖೆಗಳಲ್ಲಿ ದೊರೆಯಬೇಕಾದ ಸೌಲಭ್ಯಗಳು ನಿಗದಿತ ಅವಧಿಯೊಳಗೆ ದೊರೆಯದೆ ಇದ್ದಾಗ ತಮ್ಮ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣ ತಂತ್ರಾಂಶ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದೆ.

ಅದರಂತೆ ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಯು ಜನಸ್ಪಂದನ ಪೋರ್ಟಲ್ https://espandana.karnataka.gov.in ಅಥವಾ https://ipgrs.karnataka.gov.in, https://play.google.com/store/apps/details?id=com.csg.ipgrs ನಲ್ಲಿಯೂ ಲಭ್ಯವಿರುತ್ತದೆ. ಇದರಲ್ಲಿ ಸಾರ್ವಜನಿಕರು ನೇರವಾಗಿ ತಮ್ಮ ಹವಾಲುಗಳನ್ನು ತಂತ್ರಾಂಶದ ಮೂಲಕ ದಾಖಲಿಸಬಹುದಾಗಿರುತ್ತದೆ.

ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಗೆ ಮೀಸಲಾದ 1902 ಸಹಾಯವಾಣಿಯು ಸಹ ನಾಗರಿಕರಿಗೆ ಲಭ್ಯವಿರುತ್ತದೆ. ಅಂತರ್ಜಾಲ ವ್ಯವಸ್ಥೆ ಇಲ್ಲದ ಕುಗ್ರಾಮಗಳಿಂದಲೂ ಸಹ ಸಾರ್ವಜನಿಕರು 1902 ಸಹಾಯವಾಣಿಗೆ ಕರೆ ಮಾಡಿ ದೂರು/ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

2 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

13 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

14 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

18 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago