ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…