ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ನೇಮಕ. ಮತದಾರ ಮಿತ್ರ ಟೀ ಶರ್ಟ್, ಕ್ಯಾಪ್ ಬಿಡುಗಡೆಗೊಳಿಸಿದ RO ತೇಜಸ್ ಕುಮಾರ್

ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.

ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

11 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago