ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ನೇಮಕ. ಮತದಾರ ಮಿತ್ರ ಟೀ ಶರ್ಟ್, ಕ್ಯಾಪ್ ಬಿಡುಗಡೆಗೊಳಿಸಿದ RO ತೇಜಸ್ ಕುಮಾರ್

ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.

ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

3 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

8 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

9 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

11 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

14 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago