ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…