ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…