ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…