ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ನೇಮಕ. ಮತದಾರ ಮಿತ್ರ ಟೀ ಶರ್ಟ್, ಕ್ಯಾಪ್ ಬಿಡುಗಡೆಗೊಳಿಸಿದ RO ತೇಜಸ್ ಕುಮಾರ್

ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮತದಾರ ಮಿತ್ರ ಬಳಸುವ ಟೀ ಶರ್ಟ್ ಹಾಗೂ ಕ್ಯಾಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರ ಮಿತ್ರರನ್ನು ಮತದಾರರು ಗುರುತಿಸಲು ಮತದಾರ ಮಿತ್ರ ಎಂಬ ಬರಹವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಮತಗಟ್ಟೆಗಳಲ್ಲಿ ಈ ಮತದಾರ ಮಿತ್ರ ಕರ್ತವ್ಯ ನಿರ್ವಹಣೆ ಮಾಡಲಿದ್ದಾರೆ.
ಮತದಾರರಿಗೆ ಯಾವುದೇ ಸಹಾಯ ಅಂದರೆ ಮತದಾರ ಪಟ್ಟಿಯಲ್ಲಿ ಹೆಸರು ಹುಡುಕುವುದು, ವಿಕಲಚೇತನ, ಹಿರಿಯರಿಗೆ ವೀಲ್ ಚೇರ್ ವ್ಯವಸ್ಥೆ ಮಾಡುವುದು,
ಕುಡಿಯುವ ನೀರು ಒದಗಿಸುವುದು, ಶೌಚಾಲಯಕ್ಕೆ ದಾರಿ ತೋರಿಸುವುದು, ಮತದಾನ ವೇಳೆ ಮತದಾರನಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಪ್ರತಿ ಬೂತ್ ನಲ್ಲಿ ಮತದಾರ ಮಿತ್ರನನ್ನು ನೇಮಿಸಲಾಗಿದೆ ಎಂದರು.

ಈ ವೇಳೆ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್ ಮೋಹನ ಕುಮಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಮತದಾರ ಮಿತ್ರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

4 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

5 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago