ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್‌ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ. ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದುಕೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಥಳೀಯರಿಂದ ಸೂಕ್ಷ್ಮ ಮಾಹಿತಿಗಳನ್ನು ಪಡೆದುಕೊಳ್ಳಲು, ಅಪರಾಧಗಳನ್ನು ತಡೆಯಲು ಹಾಗೂ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್‌ ವ್ಯವಸ್ಥೆಯಲ್ಲಿಸಾರ್ವಜನಿಕ ಸಹಭಾಗಿತ್ವ ಹೆಚ್ಚಾಗಿ, ಇಲಾಖೆ, ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಪೊಲೀಸ್‌ ಸೇವೆಯನ್ನು ಒದಗಿಸಬಹುದಾಗಿದೆ ಎಂದು ಹೇಳಿದರು.

ಮನೆ–ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು ಮೂಡಿಸಲಾಗುವುದು, ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಈ ಹಿಂದೆ ದೂರುದಾರರು ಠಾಣೆಗೆ ಬಂದು ದೂರು ನೀಡಿದಾಗ ಅದನ್ನು ದಾಖಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತಿದ್ದರು, ಈಗ ಪೊಲೀಸರು ಸಾರ್ವಜನಿಕರ ಮನೆಗೆ ಹೋಗಿ ಅಹವಾಲು ಆಲಿಸುವ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆ ಸ್ನೇಹಮಯಿಯಾಗಿದೆ, ಪೊಲೀಸರು ಮನೆಗೆ ಬಂದಾಗ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ ಎಂದು ಹೇಳಿದರು.

ಅಪರಾಧಗಳ ಸ್ವರೂಪ ಈಗ ಡಿಜಿಟಲ್ ರೂಪ ಪಡೆದಿದೆ, ಡಿಜಿಟಲ್ ಅರೆಸ್ಟ್ ಮೂಲಕ ಹೆದರಿಸಿ ಹಣ ಕೀಳುವ, ಮೋಸ ಮಾಡುವ ಕೃತ್ಯಗಳು ಹೆಚ್ಚಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.

ಡಿವೈಎಸ್ಪಿ ರವಿ ಕುಮಾರ್ ಮಾತನಾಡಿ,
ಪ್ರತಿಯೊಂದು ಪೊಲೀಸ್‌ ಠಾಣೆಗಳ ಇ–ಬೀಟ್‌ ವ್ಯವಸ್ಥೆ ಅನ್ವಯ ವಿಂಗಡಿಸಲಾದ ಪ್ರದೇಶದಲ್ಲಿರುವ ಮನೆಗಳ ಪಟ್ಟಿ ಮಾಡಿಕೊಂಡು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಭೇಟಿ ನೀಡಿ, ಆಹವಾಲು ಆಲಿಸಲಿದ್ದಾರೆ. ಸಮಾಜದ ಸುರಕ್ಷತೆ ಹಾಗೂ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ, ಸಮಾಜದಲ್ಲಿ ಆಗಬಹುದಾದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಬಹಳಷ್ಟು ದೂರುಗಳು ಬಂದವು. ಶಾಲೆಯಲ್ಲಿ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ ಎಂದು ಶಾಲಾ ವಿದ್ಯಾರ್ಥಿ ಹೇಳಿದರು. ಅಟ್ರಾಸಿಟಿ ಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕುಂದು ಕೊರತೆ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ, ನಗರ ಠಾಣೆಯ ಇನ್ಸಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆಯ ಇನ್ಸಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ದೊಡ್ಡಬೆಳವಂಗಲ ಠಾಣೆಯ ಇನ್ಸಪೆಕ್ಟರ್ ಕಲ್ಲಪ್ಪ, ಹೊಸಹಳ್ಳಿ ಠಾಣೆಯ ರಾವ್ ಗಣೇಶ ಹಾಗೂ ಸಿಬ್ಬಂದಿ, ದಲಿತ ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

6 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

7 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

8 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

18 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

18 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

21 hours ago