ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್‌ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ. ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದುಕೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಥಳೀಯರಿಂದ ಸೂಕ್ಷ್ಮ ಮಾಹಿತಿಗಳನ್ನು ಪಡೆದುಕೊಳ್ಳಲು, ಅಪರಾಧಗಳನ್ನು ತಡೆಯಲು ಹಾಗೂ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್‌ ವ್ಯವಸ್ಥೆಯಲ್ಲಿಸಾರ್ವಜನಿಕ ಸಹಭಾಗಿತ್ವ ಹೆಚ್ಚಾಗಿ, ಇಲಾಖೆ, ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಪೊಲೀಸ್‌ ಸೇವೆಯನ್ನು ಒದಗಿಸಬಹುದಾಗಿದೆ ಎಂದು ಹೇಳಿದರು.

ಮನೆ–ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು ಮೂಡಿಸಲಾಗುವುದು, ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಈ ಹಿಂದೆ ದೂರುದಾರರು ಠಾಣೆಗೆ ಬಂದು ದೂರು ನೀಡಿದಾಗ ಅದನ್ನು ದಾಖಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತಿದ್ದರು, ಈಗ ಪೊಲೀಸರು ಸಾರ್ವಜನಿಕರ ಮನೆಗೆ ಹೋಗಿ ಅಹವಾಲು ಆಲಿಸುವ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆ ಸ್ನೇಹಮಯಿಯಾಗಿದೆ, ಪೊಲೀಸರು ಮನೆಗೆ ಬಂದಾಗ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ ಎಂದು ಹೇಳಿದರು.

ಅಪರಾಧಗಳ ಸ್ವರೂಪ ಈಗ ಡಿಜಿಟಲ್ ರೂಪ ಪಡೆದಿದೆ, ಡಿಜಿಟಲ್ ಅರೆಸ್ಟ್ ಮೂಲಕ ಹೆದರಿಸಿ ಹಣ ಕೀಳುವ, ಮೋಸ ಮಾಡುವ ಕೃತ್ಯಗಳು ಹೆಚ್ಚಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.

ಡಿವೈಎಸ್ಪಿ ರವಿ ಕುಮಾರ್ ಮಾತನಾಡಿ,
ಪ್ರತಿಯೊಂದು ಪೊಲೀಸ್‌ ಠಾಣೆಗಳ ಇ–ಬೀಟ್‌ ವ್ಯವಸ್ಥೆ ಅನ್ವಯ ವಿಂಗಡಿಸಲಾದ ಪ್ರದೇಶದಲ್ಲಿರುವ ಮನೆಗಳ ಪಟ್ಟಿ ಮಾಡಿಕೊಂಡು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಭೇಟಿ ನೀಡಿ, ಆಹವಾಲು ಆಲಿಸಲಿದ್ದಾರೆ. ಸಮಾಜದ ಸುರಕ್ಷತೆ ಹಾಗೂ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ, ಸಮಾಜದಲ್ಲಿ ಆಗಬಹುದಾದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಬಹಳಷ್ಟು ದೂರುಗಳು ಬಂದವು. ಶಾಲೆಯಲ್ಲಿ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ ಎಂದು ಶಾಲಾ ವಿದ್ಯಾರ್ಥಿ ಹೇಳಿದರು. ಅಟ್ರಾಸಿಟಿ ಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕುಂದು ಕೊರತೆ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ, ನಗರ ಠಾಣೆಯ ಇನ್ಸಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆಯ ಇನ್ಸಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ದೊಡ್ಡಬೆಳವಂಗಲ ಠಾಣೆಯ ಇನ್ಸಪೆಕ್ಟರ್ ಕಲ್ಲಪ್ಪ, ಹೊಸಹಳ್ಳಿ ಠಾಣೆಯ ರಾವ್ ಗಣೇಶ ಹಾಗೂ ಸಿಬ್ಬಂದಿ, ದಲಿತ ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago