ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್‌ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ. ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದುಕೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಥಳೀಯರಿಂದ ಸೂಕ್ಷ್ಮ ಮಾಹಿತಿಗಳನ್ನು ಪಡೆದುಕೊಳ್ಳಲು, ಅಪರಾಧಗಳನ್ನು ತಡೆಯಲು ಹಾಗೂ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್‌ ವ್ಯವಸ್ಥೆಯಲ್ಲಿಸಾರ್ವಜನಿಕ ಸಹಭಾಗಿತ್ವ ಹೆಚ್ಚಾಗಿ, ಇಲಾಖೆ, ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಪೊಲೀಸ್‌ ಸೇವೆಯನ್ನು ಒದಗಿಸಬಹುದಾಗಿದೆ ಎಂದು ಹೇಳಿದರು.

ಮನೆ–ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು ಮೂಡಿಸಲಾಗುವುದು, ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಈ ಹಿಂದೆ ದೂರುದಾರರು ಠಾಣೆಗೆ ಬಂದು ದೂರು ನೀಡಿದಾಗ ಅದನ್ನು ದಾಖಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತಿದ್ದರು, ಈಗ ಪೊಲೀಸರು ಸಾರ್ವಜನಿಕರ ಮನೆಗೆ ಹೋಗಿ ಅಹವಾಲು ಆಲಿಸುವ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆ ಸ್ನೇಹಮಯಿಯಾಗಿದೆ, ಪೊಲೀಸರು ಮನೆಗೆ ಬಂದಾಗ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ ಎಂದು ಹೇಳಿದರು.

ಅಪರಾಧಗಳ ಸ್ವರೂಪ ಈಗ ಡಿಜಿಟಲ್ ರೂಪ ಪಡೆದಿದೆ, ಡಿಜಿಟಲ್ ಅರೆಸ್ಟ್ ಮೂಲಕ ಹೆದರಿಸಿ ಹಣ ಕೀಳುವ, ಮೋಸ ಮಾಡುವ ಕೃತ್ಯಗಳು ಹೆಚ್ಚಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.

ಡಿವೈಎಸ್ಪಿ ರವಿ ಕುಮಾರ್ ಮಾತನಾಡಿ,
ಪ್ರತಿಯೊಂದು ಪೊಲೀಸ್‌ ಠಾಣೆಗಳ ಇ–ಬೀಟ್‌ ವ್ಯವಸ್ಥೆ ಅನ್ವಯ ವಿಂಗಡಿಸಲಾದ ಪ್ರದೇಶದಲ್ಲಿರುವ ಮನೆಗಳ ಪಟ್ಟಿ ಮಾಡಿಕೊಂಡು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಭೇಟಿ ನೀಡಿ, ಆಹವಾಲು ಆಲಿಸಲಿದ್ದಾರೆ. ಸಮಾಜದ ಸುರಕ್ಷತೆ ಹಾಗೂ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ, ಸಮಾಜದಲ್ಲಿ ಆಗಬಹುದಾದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಬಹಳಷ್ಟು ದೂರುಗಳು ಬಂದವು. ಶಾಲೆಯಲ್ಲಿ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ ಎಂದು ಶಾಲಾ ವಿದ್ಯಾರ್ಥಿ ಹೇಳಿದರು. ಅಟ್ರಾಸಿಟಿ ಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕುಂದು ಕೊರತೆ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ, ನಗರ ಠಾಣೆಯ ಇನ್ಸಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆಯ ಇನ್ಸಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ದೊಡ್ಡಬೆಳವಂಗಲ ಠಾಣೆಯ ಇನ್ಸಪೆಕ್ಟರ್ ಕಲ್ಲಪ್ಪ, ಹೊಸಹಳ್ಳಿ ಠಾಣೆಯ ರಾವ್ ಗಣೇಶ ಹಾಗೂ ಸಿಬ್ಬಂದಿ, ದಲಿತ ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago