ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು ಗಮನಿಸಿ, ಸರ್ಕಾರ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 10 ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಎಂದು ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಒತ್ತಾಯಿಸಿದರು.

ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಸೋಮವಾರ ರೈತ ಸಂಘ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈನುಗಾರಿಕೆ ನಡೆಸುವ ರೈತರು ಉತ್ಪಾದನಾ ವೆಚ್ಚ ಹೆಚ್ಚಳದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಸಗೊಬ್ಬರಗಳ ಬೆಲೆ ಏರಿಕೆ ಹಾಗೂ ಅಭಾವದ ಪರಿಸ್ಥಿತಿ ರೈತರ ಮೇಲಿನ ಹೊರೆ ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದರು.

ಹಾಲಿನ ಪ್ರೋತ್ಸಾಹಧನವನ್ನು 10 ರೂ. ಹೆಚ್ಚಿಸುವಂತೆ ಒತ್ತಾಯಿಸಿ ಜು.9ರಂದು ತಾಲ್ಲೂಕಿನ ರೈತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಿದ್ದಾರೆ. ಈ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲ ಮುಖಂಡರು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದ ಗ್ರಾಮೀಣ ಭಾಗದಲ್ಲಿ ಶೇ.80ಕ್ಕೂ ಹೆಚ್ಚು ಮಹಿಳೆಯರು ಹೈನುಗಾರಿಕೆಯನ್ನು ಅವಲಂಬಿಸಿ ಕುಟುಂಬ ನಿರ್ವಹಿಸುತ್ತಿದ್ದು, ಲಕ್ಷಾಂತರ ರೈತರು ಇದೇ ವೃತ್ತಿಯಿಂದ ಜೀವನ ಸಾಗಿಸುತ್ತಿದ್ದಾರೆ. ಬರದ ಛಾಯೆ ಕಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಪ್ರಣಾಳಿಕೆಗೆ ಅನುಗುಣವಾಗಿ ಹಾಲಿನ ಪ್ರೋತ್ಸಾಹಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಹಾಲಿನ ಪ್ರೋತ್ಸಾಹಧನ ಹೆಚ್ಚಿಸಿ ರೈತರಿಗೆ ನೆರವಾಗಿದ್ದರು. ಈಗಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಹಿತದೃಷ್ಟಿಯಿಂದ ಪ್ರೋತ್ಸಾಹಧನ ಹೆಚ್ಚಿಸಬೇಕು. ಇಲ್ಲವಾದರೆ ರೈತ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯವ್ಯಾಪಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೊರೊನಾ ಸಂಕಷ್ಟದ ಸಮಯದಲ್ಲಿಯೂ ರೈತರು ಹಾಲಿನ ಪೂರೈಕೆಯನ್ನು ನಿರಂತರವಾಗಿ ನಡೆಸಿ ಸರ್ಕಾರ ಹಾಗೂ ಜನರ ಬೆನ್ನಿಗೆ ನಿಂತಿದ್ದರು ಎಂಬುದನ್ನು ಸರ್ಕಾರ ಮರೆಯಬಾರದು ಎಂದು ಹೇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಮಾತನಾಡಿ, ಹಿಂಡಿ, ಬೂಸ, ಮೇವು ಸೇರಿದಂತೆ ಹಾಲು ಉತ್ಪಾದನೆಗೆ ಅಗತ್ಯವಿರುವ ಎಲ್ಲಾ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಸು ಸಾಕಿ ಬದುಕುವ ಬದಲು, ಹಸುವನ್ನು ಸಾಕಲು ನಾವು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬರಗಾಲದ ಮುನ್ಸೂಚನೆ ಇರುವುದರಿಂದ ಹೈನುಗಾರ ರೈತರಿಗೆ ಕನಿಷ್ಠ 10 ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ಎಂಪಿಸಿಎಸ್ ಸಂಘಗಳ ನೌಕರರ ಸಂಘದ ಅಧ್ಯಕ್ಷ ರವೀಂದ್ರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago