ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…