ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು-ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ- ಸಿಎಂ‌ ಸಿದ್ದರಾಮಯ್ಯ

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.

ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನೊಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ‌ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮ‌ಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದು ಹೇಳಿದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

4 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

18 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

19 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

20 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

20 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago