ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…