ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಖೋಡೆ ವೃತ್ತದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದು ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.
ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು.
ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಹೇಳಿದರು.
ಆದಿಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…