ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು- ಸಿಎಂ ಸಿದ್ದರಾಮಯ್ಯ

ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಖೋಡೆ ವೃತ್ತದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದು ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.

ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು.

ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಹೇಳಿದರು.

ಆದಿಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

18 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago