ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಖೋಡೆ ವೃತ್ತದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದು ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.
ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು.
ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಹೇಳಿದರು.
ಆದಿಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…