Categories: Accident

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು ಕುಮಟಾದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಓರ್ವ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗದ ಹೆಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದ ತೀವ್ರತೆಗೆ ಕಾರ್‌ ಟಾಪ್ ಕಿತ್ತಿದ್ದು, ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಮೃತ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌, ಗಾಯಾಳುಗಳು ಎಸ್‌ಐ ಎಂದು ತಿಳಿದು ಬಂದಿದೆ. ಐವರು ಒಂದೇ ಕಾರ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು-ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ವೀರನಪುರ ಕಾಲೋನಿಯ ನಿವಾಸಿ ಪ್ರವೀಣ್(24) ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ತಾಲೋಕು ಮಾದಾಪಟ್ಟಣದ ಬಳಿ ಅಪಘಾತ ನಡೆದಿದೆ.

ಮತ್ತೊಂದು ಘಟನೆಯಲ್ಲಿ ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದ ಬಳಿ ಅಪಘಾತ ಸಂಭವಿಸಿದೆ. ಅಪಘಾತ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೈಕ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹೋದರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬರ್ಗಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಗುರು ಹಾಗೂ ವಿಠಲ ಹರಿಕಾಂತ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳು ಬೆಟ್ಕುಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದ್ದು, ಬೈಕ್ ಸವಾರರು ಕಿಮಾನಿ ಕಡೆಯಿಂದ ಬೈಕ್‌ನಲ್ಲಿ ಬಂದು ಕುಮಟಾ ಕಡೆಗೆ ಹೋಗಲು ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವೇಳೆ, ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಚಲಿಸುತ್ತಿದ್ದ ತೆಲಂಗಾಣ ನೋಂದಣಿ ಹೊಂದಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

14 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

18 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

19 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago