ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು. ಆದ್ದರಿಂದ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ ರಕ್ಷಕ್ ಬುಲೆಟ್, ಪೊಲೀಸರ ವಿಚಾರಣೆಗೆ ಸಹಕರಿಸಿದರು. ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಕ್ಷಕ್ ಬುಲೆಟ್, ಘಟನೆ‌ ಕುರಿತು ಈಗಾಗಲೇ ಪೋಲೀಸರಿಗೆ ಮಾಹಿತಿ ನೀಡಿದ್ದೇನೆ. ಘಟನೆ ನಡೆದ ದಿನ ಯಶಸ್ವಿನಿ, ದಾಸ  ಸೇರಿ ಕೆಲವೇ ಕೆಲವು ಜನ ಮಾತ್ರ ಇದ್ದೆವು. ಅಲ್ಲಿ ನಡೆದ ಘಟನೆ ಕುರಿತು ಈಗಾಗಲೇ ಮಾತನಾಡಿದ್ದೇನೆ. ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಿದ್ದೇನೆ. ನಾವು ಕಲಾವಿದರ ಮನೆಯಿಂದ ಬಂದವರು. ಗೂಂಡಾಗಿರಿ ಮಾಡೋಕೆ ಬಂದಿಲ್ಲ. ನಾವು ಇನ್ನೂ ಬೆಳೆಯಬೇಕು ಎಂದರು.

ಬೇರೆಯವರ ಬಗ್ಗೆ ಚೀಪಾಗಿ ಮಾತಾಡೋದು ನನ್ನ ಕ್ಯಾರೆಕ್ಟರ್ ಅಲ್ಲ. ಘಟನೆ ಬಗ್ಗೆ ಎಷ್ಟೇ ಮಾತನಾಡಿದ್ರು ಡಿಸ್ಟಬೆನ್ಸ್ ಆಗ್ತಿರ್ತೀವಿ ಎಂದು ಹೇಳಿದರು.

ನಾವಿಲ್ಲಿ ಆ್ಯಕ್ಟ್ ಮಾಡೋಕೆ ಬಂದಿದ್ದೇವೆ.. ನಮ್ಮ ತಂದೆ ದೊಡ್ಡ ಕಲಾವಿದರು. ನಾವಿಲ್ಲಿ ಧಮ್ಕಿ ಹಾಕೋಕೆ.. ರೌಡಿಸಂ ಮಾಡೋಕೆ… ಸುಫಾರಿ ಕೊಡೋಕೆ ಬಂದಿಲ್ಲ. ಆವತ್ತಿಂದ ಇವತ್ತಿನವರೆಗೂ ನನ್ನದೊಂದು ಬ್ಲಾಕ್ ಮಾರ್ಕಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

6 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

10 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

10 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

18 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago