ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು. ಆದ್ದರಿಂದ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ ರಕ್ಷಕ್ ಬುಲೆಟ್, ಪೊಲೀಸರ ವಿಚಾರಣೆಗೆ ಸಹಕರಿಸಿದರು. ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಕ್ಷಕ್ ಬುಲೆಟ್, ಘಟನೆ ಕುರಿತು ಈಗಾಗಲೇ ಪೋಲೀಸರಿಗೆ ಮಾಹಿತಿ ನೀಡಿದ್ದೇನೆ. ಘಟನೆ ನಡೆದ ದಿನ ಯಶಸ್ವಿನಿ, ದಾಸ ಸೇರಿ ಕೆಲವೇ ಕೆಲವು ಜನ ಮಾತ್ರ ಇದ್ದೆವು. ಅಲ್ಲಿ ನಡೆದ ಘಟನೆ ಕುರಿತು ಈಗಾಗಲೇ ಮಾತನಾಡಿದ್ದೇನೆ. ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಿದ್ದೇನೆ. ನಾವು ಕಲಾವಿದರ ಮನೆಯಿಂದ ಬಂದವರು. ಗೂಂಡಾಗಿರಿ ಮಾಡೋಕೆ ಬಂದಿಲ್ಲ. ನಾವು ಇನ್ನೂ ಬೆಳೆಯಬೇಕು ಎಂದರು.
ಬೇರೆಯವರ ಬಗ್ಗೆ ಚೀಪಾಗಿ ಮಾತಾಡೋದು ನನ್ನ ಕ್ಯಾರೆಕ್ಟರ್ ಅಲ್ಲ. ಘಟನೆ ಬಗ್ಗೆ ಎಷ್ಟೇ ಮಾತನಾಡಿದ್ರು ಡಿಸ್ಟಬೆನ್ಸ್ ಆಗ್ತಿರ್ತೀವಿ ಎಂದು ಹೇಳಿದರು.
ನಾವಿಲ್ಲಿ ಆ್ಯಕ್ಟ್ ಮಾಡೋಕೆ ಬಂದಿದ್ದೇವೆ.. ನಮ್ಮ ತಂದೆ ದೊಡ್ಡ ಕಲಾವಿದರು. ನಾವಿಲ್ಲಿ ಧಮ್ಕಿ ಹಾಕೋಕೆ.. ರೌಡಿಸಂ ಮಾಡೋಕೆ… ಸುಫಾರಿ ಕೊಡೋಕೆ ಬಂದಿಲ್ಲ. ಆವತ್ತಿಂದ ಇವತ್ತಿನವರೆಗೂ ನನ್ನದೊಂದು ಬ್ಲಾಕ್ ಮಾರ್ಕಿಲ್ಲ ಎಂದು ಹೇಳಿದರು.
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…