ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು. ಆದ್ದರಿಂದ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ ರಕ್ಷಕ್ ಬುಲೆಟ್, ಪೊಲೀಸರ ವಿಚಾರಣೆಗೆ ಸಹಕರಿಸಿದರು. ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಕ್ಷಕ್ ಬುಲೆಟ್, ಘಟನೆ ಕುರಿತು ಈಗಾಗಲೇ ಪೋಲೀಸರಿಗೆ ಮಾಹಿತಿ ನೀಡಿದ್ದೇನೆ. ಘಟನೆ ನಡೆದ ದಿನ ಯಶಸ್ವಿನಿ, ದಾಸ ಸೇರಿ ಕೆಲವೇ ಕೆಲವು ಜನ ಮಾತ್ರ ಇದ್ದೆವು. ಅಲ್ಲಿ ನಡೆದ ಘಟನೆ ಕುರಿತು ಈಗಾಗಲೇ ಮಾತನಾಡಿದ್ದೇನೆ. ಪೊಲೀಸರಿಗೆ ಈಗಾಗಲೇ ಮಾಹಿತಿ ನೀಡಿದ್ದೇನೆ. ನಾವು ಕಲಾವಿದರ ಮನೆಯಿಂದ ಬಂದವರು. ಗೂಂಡಾಗಿರಿ ಮಾಡೋಕೆ ಬಂದಿಲ್ಲ. ನಾವು ಇನ್ನೂ ಬೆಳೆಯಬೇಕು ಎಂದರು.
ಬೇರೆಯವರ ಬಗ್ಗೆ ಚೀಪಾಗಿ ಮಾತಾಡೋದು ನನ್ನ ಕ್ಯಾರೆಕ್ಟರ್ ಅಲ್ಲ. ಘಟನೆ ಬಗ್ಗೆ ಎಷ್ಟೇ ಮಾತನಾಡಿದ್ರು ಡಿಸ್ಟಬೆನ್ಸ್ ಆಗ್ತಿರ್ತೀವಿ ಎಂದು ಹೇಳಿದರು.
ನಾವಿಲ್ಲಿ ಆ್ಯಕ್ಟ್ ಮಾಡೋಕೆ ಬಂದಿದ್ದೇವೆ.. ನಮ್ಮ ತಂದೆ ದೊಡ್ಡ ಕಲಾವಿದರು. ನಾವಿಲ್ಲಿ ಧಮ್ಕಿ ಹಾಕೋಕೆ.. ರೌಡಿಸಂ ಮಾಡೋಕೆ… ಸುಫಾರಿ ಕೊಡೋಕೆ ಬಂದಿಲ್ಲ. ಆವತ್ತಿಂದ ಇವತ್ತಿನವರೆಗೂ ನನ್ನದೊಂದು ಬ್ಲಾಕ್ ಮಾರ್ಕಿಲ್ಲ ಎಂದು ಹೇಳಿದರು.
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…