ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದ್ದು, ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.
ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ,ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…