ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದ್ದು, ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.
ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ,ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…