ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದ್ದು, ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ,ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

2 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago