ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದ್ದು, ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.
ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ,ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…