ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದ್ದು, ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ,ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

13 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

16 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

22 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

23 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago