ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್ಕಾರ್ಡ್, ರೇಷನ್ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…