ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಕಾರ್ಡ್ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್‌ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್‌ಕಾರ್ಡ್, ರೇಷನ್‌ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್‌ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ  ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

35 minutes ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

1 hour ago

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

2 hours ago

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

4 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

12 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

12 hours ago