ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್ಕಾರ್ಡ್, ರೇಷನ್ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…