ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಕಾರ್ಡ್ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್‌ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್‌ಕಾರ್ಡ್, ರೇಷನ್‌ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್‌ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ  ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

6 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

10 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

19 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago