ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್ಕಾರ್ಡ್, ರೇಷನ್ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…