ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ “ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ABPMJAY-CMArk ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನೆ ಪಡೆಯಬಹುದಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಇಲಾಖೆ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳ ಸಹಕಾರದೊಂದಿಗೆ AB- PMJAY-CMARK ಕಾರ್ಡ್ ನ್ನು ಪಡೆಯಲು ಎಲ್ಲಾ ಎಪಿಎಲ್/ಬಿಪಿಎಲ್ ಫಲಾನುಭವಿಗಳು ತಮ್ಮ ಆಧಾರ್ಕಾರ್ಡ್, ರೇಷನ್ ಕಾರ್ಡ್ (ಪಡಿತರಚೀಟಿ), ಆಧಾರ್ ನೋಂದಾಯಿತ ಮೊಬೈಲ್ನೊಂದಿಗೆ ಗುರುತಿನ ಚೀಟಿಗಳನ್ನು Ayushman App/BIS 2.0 self registration app 2.0 Android Mobile Playstore/Google ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳುವ ಮೂಲಕ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆಯಬಹುದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…