ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ, ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಸವುದು ಕಡ್ಡಾಯ- ಜಿಲ್ಲಾಧಿಕಾರಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ,
ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.

E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.

1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್‌ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು.

2) ಬಯೋಮೆಟ್ರಿಕ್‌ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್‌ ಕೇಂದ್ರ, ಸಿಎಸ್‌ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.

3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.

14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

5 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

6 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

10 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

12 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

15 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

16 hours ago