ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ, ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಸವುದು ಕಡ್ಡಾಯ- ಜಿಲ್ಲಾಧಿಕಾರಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ,
ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.

E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.

1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್‌ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು.

2) ಬಯೋಮೆಟ್ರಿಕ್‌ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್‌ ಕೇಂದ್ರ, ಸಿಎಸ್‌ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.

3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.

14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

11 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

12 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

15 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

1 day ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago