ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ, ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಸವುದು ಕಡ್ಡಾಯ- ಜಿಲ್ಲಾಧಿಕಾರಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ,
ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.

E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.

1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್‌ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು.

2) ಬಯೋಮೆಟ್ರಿಕ್‌ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್‌ ಕೇಂದ್ರ, ಸಿಎಸ್‌ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.

3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.

14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

18 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago